ಶಿವಮೊಗ್ಗ:ಆಟವಾಡುತ್ತಾ ರಸ್ತೆ ಕಡೆಗೆ ಬಂದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಮೃತಪಟ್ಟಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗುಂಡುಗದ್ದೆ ಎಂಬಲ್ಲಿ ಭಾನುವಾರ ನಡೆದಿದೆ.
ತ್ರಿಯಂಬಕಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡೆಪಾಲ್ ಸಮೀಪದ ಗುಂಡುಗದ್ದೆಯ ಪ್ರಗತ್ ಎಂಬುವರ 6 ವರ್ಷದ ಪುತ್ರ ಋಷ್ಯ ಮೃತಪಟ್ಟ ಬಾಲಕನಾಗಿದ್ದಾನೆ.
ಘಟನೆಯ ವಿವರ:
ಬಾಲಕನ ಮನೆಯ ಪಕ್ಕದಲ್ಲೇ ಲಾರಿಯೊಂದನ್ನು ನಿಲ್ಲಿಸಲಾಗಿತ್ತು. ಮಗು ಆಟವಾಡುತ್ತಾ ರಸ್ತೆಗೆ ಬಂದಾಗ, ಅಲ್ಲಿ ನಿಂತಿದ್ದ ಲಾರಿಯ ಮರೆಯಿಂದಾಗಿ ರಸ್ತೆಯಲ್ಲಿ ಬರುತ್ತಿದ್ದ ಕಾರು ಚಾಲಕನಿಗೆ ಬಾಲಕ ಕಾಣಿಸಿಲ್ಲ ಎನ್ನಲಾಗಿದೆ. ಈ ವೇಳೆ ವೇಗವಾಗಿ ಬಂದ ಕಾರು ಬಾಲಕನಿಗೆ ನೇರವಾಗಿ ಡಿಕ್ಕಿ ಹೊಡೆದಿದೆ.
ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳೀಯರು ಹಾಗೂ ಕುಟುಂಬಸ್ಥರು ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವಷ್ಟರಲ್ಲೇ ಮಗು ಮೃತಪಟ್ಟಿದೆ ಎಂದು ವೈದ್ಯರು ತಪಾಸಣೆ ನಡೆಸಿ ಧೃಡಪಡಿಸಿದ್ದಾರೆ.

No comments:
Post a Comment